ಮಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ನಾಯಿ…!



(ನ್ಯೂಸ್‌ ಕಡಬ) newskadaba.com,  ನ.15 ಮಂಗಳೂರು: ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಕೊಲೆ ಎಂದು ಆತಂಕಕ್ಕೊಳಗಾಗಿದ್ದಾರೆ.





ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ಎಂದು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ.






ಈ ನಡುವೆ ಸ್ಥಳಕ್ಕೆ ಭೇಟಿ ನೀಡಿದ ವಿಧಿವಿಜ್ಞಾನ ವೈದ್ಯರು, ಪ್ರಾಣಿಯ ದಾಳಿಯಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂದು ದೃಢಪಡಿಸಿದ್ದಾರೆ.

error: Content is protected !!
Scroll to Top