(ನ್ಯೂಸ್ ಕಡಬ) newskadaba.com, ನ.20 ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ ಸಮಯದಲ್ಲಿ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ ಟೈಲ್ಸ್ ಮಳಿಗೆಗೆ ಬುರ್ಖಾ ಧರಿಸಿ ಬಂದ ಪತ್ನಿ ಜ್ಯೋತಿ ಸೋಮಯಾಜಿ ಅವರು ಅಂಗಡಿಯ ಕ್ಯಾಶ್ ಕೌಂಟರಿನಲ್ಲಿದ್ದ ಪತಿಗೆ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ತಕ್ಷಣ ಆರೋಪಿ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ…ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ………..








