(ನ್ಯೂಸ್ ಕಡಬ) newskadaba.com,ಡಿ.23: ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿಯಾಗಿದ್ದು, ಇವರ ಪೈಕಿ 2,326 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 2025 ಡಿ.1ರ ಅಂತ್ಯದವರೆಗೆ 3.55 ಲಕ್ಷ ಪದವೀಧರರು ಮತ್ತು 6,804 ಡಿಪ್ಲೊಮಾ ಪದವೀಧರರು ಸೇರಿ ಒಟ್ಟು 3.62 ಲಕ್ಷ ಮಂದಿ ನಿರುದ್ಯೋಗಿಗಳು ಯುವ ನಿಧಿ ಯೋಜನೆಯಡಿ ನೋಂದಣಿಯಾಗಿದ್ದಾರೆ.
ಯುವ ನಿಧಿ ಯೋಜನೆಗೆ ಪೂರಕವಾಗಿ ಉದ್ಯೋಗಾವಕಾಶ ಹೆಚ್ಚಿಸಲು ರಾಜ್ಯ ಸರ್ಕಾರ ಆರಂಭಿಸಿದ ನಿರುದ್ಯೋಗ ಭತ್ಯೆ ಜತೆಗೆ ಉಚಿತ ಕೌಶಲ್ಯ ತರಬೇತಿ ಕಲ್ಪಿಸುವ ‘ಯುವ ನಿಧಿ ಪ್ಲಸ್’ ಕಾರ್ಯಕ್ರಮದಡಿ 17,715 ಮಂದಿ ಕೌಶಲ್ಯ ತರಬೇತಿ ಪಡೆದುಕೊಂಡಿದ್ದಾರೆ. ಈ ಪೈಕಿ 2,326 ಮಂದಿ ಉದ್ಯೋಗ ಪಡೆದುಕೊಳ್ಳಲು ಸಫಲರಾಗಿದ್ದಾರೆ. ಹೀಗಾಗಿ ಅವರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂದು ಸರ್ಕಾರದ ಅಂಕಿ-ಅಂಶಗಳೇ ಹೇಳುತ್ತಿವೆ…………….








