(ನ್ಯೂಸ್ ಕಡಬ) newskadaba.com, ಫೆ.13: 2026ರ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಪರೀಕ್ಷಾ ದಿನಗಳಂದು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗಲು ಪ್ರತ್ಯೇಕ ಪಾಸ್ ಪಡೆಯುವ ಅಗತ್ಯವಿಲ್ಲ. ಬಸ್ ಕಂಡಕ್ಟರ್ಗೆ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಹತ್ತಿರ ಬಸ್ ನಿಲುಗಡೆ ನೀಡಲು ಚಾಲಕ ಮತ್ತು ನಿರ್ವಾಹಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬಿಎಂಟಿಸಿ ಬೆಂಗಳೂರಿನ ನಗರ ಸಾರಿಗೆಯ ಸಾಮಾನ್ಯ ಬಸ್ಗಳಲ್ಲಿ .ಕೆಎಸ್ಆರ್ಟಿಸಿ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.








