ಪೊಲೀಸ್ ಜೀಪ್ – ಲಾರಿ ಮುಖಾಮುಖಿ ಢಿಕ್ಕಿ ► ಮೂವರು ಪೊಲೀಸ್ ಅಧಿಕಾರಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಮೇ.10. ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಮೃತ ಅಧಿಕಾರಿಗಳನ್ನು ಸಿಐಡಿ ಡಿವೈಎಸ್ಪಿ ಬಾಳೇಗೌಡ(55), ಸರ್ಕಲ್ ಇನ್ಸ್‌ಪೆಕ್ಟರ್ ಶಿವಸ್ವಾಮಿ(55) ಹಾಗೂ ಚಾಲಕ ವೇಣುಗೋಪಾಲ್(25) ಎಂದು ಗುರುತಿಸಲಾಗಿದೆ. ಇವರು ಚುನಾವಣಾ ಕರ್ತವ್ಯದ ನಿಮಿತ್ತ ತೆರಳುತ್ತಿದ್ದಾಗ ಬಾಗಲಕೋಟೆಯ ಸಂಗಮ ಕ್ರಾಸ್ ಬಳಿ ಪೊಲೀಸ್ ಜೀಪ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ಚಾಹನ ನಜ್ಜುಗುಜ್ಜಾಗಿದ್ದು, ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group