ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ



(ನ್ಯೂಸ್ಕಡಬ) newskadaba.com,  ಫೆ.20 : ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ.. ವಿದ್ಯಾರ್ಥಿ ಬ್ಲಾಕ್‌ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ.





ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ವಿದ್ಯಾರ್ಥಿಯನ್ನು  ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದಿದ್ದರು. ಬಳಿಕ ಕ್ಲಾಸ್ ರೂಮ್‌ನಿಂದ ಆಚೆ ಹೋಗುವಂತೆ ಹೇಳಿದ್ದರು. ಇದಕ್ಕೆ ಕೆರಳಿ ಕೆಂಡವಾದ ಶಹಬಾಜ್ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದ.






ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಪಾಲಕರ ಗಮನಕ್ಕೆ ತಂದಿದೆ. ಜೊತೆಗೆ ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ. ಕಾಲೇಜ್ ಆಡಳಿತ ಮಂಡಳಿಯಿಂದಾದಲಿ ಅಥವಾ ಹಲ್ಲೆಗೆ ಒಳಗಾದ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್‌ನಿಂದ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.

error: Content is protected !!
Scroll to Top