(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಮಾರ್ಚ್ 10ರೊಳಗೆ ಸರಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಕಾರಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆಯನ್ನು ನೀಡಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ದೀಪಕ್ ರೈ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ 15ರ ವರೆಗೆ ಕಪ್ಪುಪಟ್ಟಿ ಧರಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ಒದಗಿಸಲಾಗುವುದು. ಮಾರ್ಚ್ 16ರಿಂದ ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದರು. ಈ ಸಂದರ್ಭ ಡಾ.ಅಕ್ಷತಾ, ಡಾ.ರಾಜೇಶ್, ಡಾ.ತುಫೇಲ್, ಡಾ.ಶರತ್ ಬಾಬು, ಮಹಾಲಕ್ಷ್ಮೀ ಮತ್ತು ಯೊಗೀಶ್ ಮೊದಲಾದವರು ಉಪಸ್ಥಿತರಿದ್ದರು.








