ಮಂಗಳೂರು : ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ – ಎಸ್‌ಡಿಎ ಸಂಪತ್ ಬಂಧನ



(ನ್ಯೂಸ್ಕಡಬ) newskadaba.com,  ಮಾ.03 :  ಕಮಿಷನ್‌ಗಾಗಿ ಬೇಡಿಕೆ ಮುಂದಿಟ್ಟ ಆರೋಪದ ಮೇರೆಗೆ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್‌ಡಿಎ ಸಂಪತ್ ಎಂಬಾತನನ್ನು ಸೋಮವಾರ ಬಂಧಿಸಿದ್ದಾರೆ..





ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾದ ಫಿರ್ಯಾದಿಯು 2025ನೆ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಪಂಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರಕಾರಿ ಕಾಮಗಾರಿ ಗಳನ್ನು ನಿರ್ವಹಿಸಿದ್ದರು.






ಈ ಕಾಮಗಾರಿಯ ಬಿಲ್‌ಗೆ 4 ಪರ್ಸೆಂಟ್‌ನಂತೆ 22,600 ರೂ. ಕೊಡಬೇಕು ಎಂಬುದಾಗಿ ಸಂಪತ್ ಬೇಡಿಕೆ ಮುಂದಿಟ್ಟಿದ್ದ. ಈ ಬಗ್ಗೆ ಗುತ್ತಿಗೆದಾರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುವಾಗಲೇ ದಾಳಿ ನಡೆಸಿ ಬಂಧಿಸಿದ್ದಾರೆ.

error: Content is protected !!
Scroll to Top