(ನ್ಯೂಸ್ ಕಡಬ) newskadaba.com ಮಾ. 17. ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ 5 ವರ್ಷದ ಬಾಲಕಿ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಸಮೀಪ ನಡೆದಿದೆ.
ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ ವಿರುದ್ದ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಸಾಜಿರಾ ಹಾಗೂ ಇಸ್ಮಾಯಿಲ್ ಗಂಭೀರವಾಗಿ ಗಾಯಗೊಂಡಿದ್ದು, ಬಾಲಕಿ ಸುಹೈರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.








