ಬಂಟ್ವಾಳ: ಚಲಿಸುತ್ತಿದ್ದಂತೆಯೇ ಬೆಂಕಿಗಾಹುತಿಯಾದ ಆಟೋ ರಿಕ್ಷಾ



(ನ್ಯೂಸ್ಕಡಬ) newskadaba.com,ಎ.11: ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ (ವಿಶಾಲನಗರ) ಎಂಬಲ್ಲಿ, ಬಿ.ಸಿ.ರೋಡು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.ಬಾಂಬಿಲ ನಿವಾಸಿ ರೇವಣ್ಣ ಅವರಿಗೆ ಸೇರಿದ ಗ್ಯಾಸ್ ಕಿಟ್ ಹೊಂದಿದ್ದ ಆಟೋ ರಿಕ್ಷಾ ಇದಾಗಿದೆ.







ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾದ ಕಾರಣ ಪೆಟ್ರೋಲ್ ಬಳಸಿಕೊಂಡು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಗ್ಯಾಸ್ ಸೋರಿಕೆಯ ವಾಸನೆ ಬಂದ ಕೂಡಲೇ ಚಾಲಕ ವಾಹನ ನಿಲ್ಲಿಸಿದ್ದಾರೆ.ರಿಕ್ಷಾದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಚಾಲಕ ರೇವಣ್ಣ ಅವರು ಸಮಯಪ್ರಜ್ಞೆ ಮೆರೆದು ಕೂಡಲೇ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.






ಬೆಂಕಿಯ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

error: Content is protected !!
Scroll to Top