ಸುಳ್ಯ: ನಿಷೇಧಾಜ್ಞೆಯ ನಡುವೆಯೇ ಸಂಭ್ರಮಾಚರಣೆ ► ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.15. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಅಂಗಾರರು ಜಯಗಳಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಲುದ್ದೇಶಿಸಿದ ವಿಜಯೋತ್ಸವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಕಾರ್ಯಕರ್ತರು ಹಾಗೂ ಪೊಲೀಸರು ನಡುವೆ ವಾಗ್ವಾದ ನಡೆಘಟನೆ ಸುಳ್ಯದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತರು ಹರ್ಷಾಚರಣೆಗೆ ಸಿದ್ಧರಾದಾಗ ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಪೊಲೀಸರು ತಡೆಯೊಡ್ಡಿದ್ದು, ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಚುನಾವಣಾ ಕಚೇರಿಯ ಕೆಳಗಿನ ರಸ್ತೆಯ ಬದಿಯಲ್ಲಿ ಘೋಷಣೆ ಕೂಗಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರ‌ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಮುಖಂಡರು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ತಣ್ಣಗಾಗಿಸಿದರು.

error: Content is protected !!

Join the Group

Join WhatsApp Group