ಬಸ್ – ಕಾರು ಢಿಕ್ಕಿ: ಮಹಿಳೆ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ರಾಯಚೂರು, ಜು.10. ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ರಾಯಚೂರಿನ ಸಾತ್ ಮೈಲ್ ಬಳಿ ನಡೆದಿದೆ.

ರಾಯಚೂರಿನಿಂದ ಗುಲ್ಬರ್ಗಾಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ತೆರಳುತ್ತಿದ್ದ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿದ ಪರಿಣಾಮ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ರಸ್ತೆಯ ಪಕ್ಕದ ಹೊಲದಲ್ಲಿ ಪಲ್ಟಿಯಾಗಿದೆ. ಈ ವೇಳೆ ಬಸ್‍ನಲ್ಲಿದ್ದ ಅಮೃತಾ (25) ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ಕಾಲುಗಳು ಮುರಿದಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group