ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿದ ಬಾಲಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಬುಧವಾರದಂದು ನಡೆದಿದೆ.

ನಾಪತ್ತೆಯಾಗಿರುವ ಬಾಲಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಎಂದು‌ ಗುರುತಿಸಲಾಗಿದೆ. ಈತ ಬುಧವಾರದಂದು ಶಾಲೆಗೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದ್ದು, ಪತ್ತೆಯಾಗದ ಕಾರಣ ಆತನ ತಾಯಿ ಕಡಬ ಠಾಣೆಗೆ ನೀಡಿರುವ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಣ್ಣೆಗೆಂಪು ಮೈ ಬಣ್ಣವಿದ್ದು, ಕೋಲು ಮುಖ ಹೊಂದಿರುವ ಈತ ನೀಲಿ ಬಣ್ಣದ ಅಂಗಿ ಧರಿಸಿದ್ದು, ತುಳು ಭಾಷೆ ಮಾತಾಡುತ್ತಾನೆ. ಈತನನ್ನು ಕಂಡವರು ಕಡಬ ಪೊಲೀಸ್ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂನ್ನು ಸಂಪರ್ಕಿಸುವಂತೆ ಕೋರಲಾಗಿದೆ.

error: Content is protected !!

Join the Group

Join WhatsApp Group