(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.
ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ, ಇದೀಗ ಜಂಟಿ ಕಾರ್ಯಾಚರಣೆಯ ಯಶಸ್ಸಿನ ಫಲವಾಗಿ ಆರೋಪಿ ರಸುಲ್ ನನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ.









