ಆಗಸ್ಟ್ 15ರ ವರೆಗೆ ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ



(ನ್ಯೂಸ್ ಕಡಬ) newskadaba.com ಜು. 17. ರಾಷ್ಟ್ರರಾಜಧಾನಿ ಹೊಸದಿಲ್ಲಿಯ ಐತಿಹಾಸಿಕ ಕೆಂಪುಕೋಟೆ ಸಂಕೀರ್ಣವನ್ನು ಆಗಸ್ಟ್ 15ರ ವರೆಗೆ ಸಾರ್ವಜನಿಕರಿಗೆ ಮುಚ್ಚಲಾಗಿದೆ.







ಕೆಂಪುಕೋಟೆ ಸಂಕೀರ್ಣದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಸಿದ್ದತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಈ ಆದೇಶವನ್ನು ಹೊರಡಿಸಿದೆ.






ಪುರಾತನ ಸ್ಮಾರಕಗಳು ಹಾಗೂ ಪುರಾತತ್ವ ತಾಣಗಳು ಮತ್ತು ಪಳೆಯುಳಿಕೆಗಳ ಕಾನೂನುಗಳು, 1959ರ ನಿಯಮ 5ರಡಿ ಪ್ರದತ್ತವಾದ ಅಧಿಕಾರಗಳನ್ನು ಬಳಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ ಎಂದು ASI ಪ್ರಕಟಣೆ ತಿಳಿಸಿದೆ.

error: Content is protected !!
Scroll to Top