ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ ಚುರುಕು



(ನ್ಯೂಸ್‌ ಕಡಬ) newskadaba.com,  ಜು.27 : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ಪಡ್ನೂರು ಗ್ರಾಮದ ಅಜೇಯನಗರದ ನಿವಾಸಿಯಾಗಿರುವ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಗ್ರಂಥಪಾಲಕಿ ವಿಜಯಾ ಟಿ. (60) ..







ಇವರ ಮೃತದೇಹ ಬಂಟ್ವಾಳ ತಾಲೂಕಿನ ಶಂಭೂರು ಸಮೀಪದ ನೇತ್ರಾವತಿ ನದಿ ಅಣೆಕಟ್ಟಿನಲ್ಲಿ ಶನಿವಾರ ಪತ್ತೆಯಾಗಿದೆ.ಗುರುವಾರ ಬೆಳಿಗ್ಗೆ ಪುತ್ತೂರು ಪಟ್ಟಣಕ್ಕೆ ತೆರಳಿದ್ದ ಇವರು ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.






ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!
Scroll to Top