(ನ್ಯೂಸ್ ಕಡಬ) newskadaba.com, ಜು.31 : ಅತ್ಯಂತ ತೀವ್ರ ಪರಿಸ್ಥಿತಿಗಳಲ್ಲಿ ಗುಂಡು ಹಾರಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಪೆಲೆಟ್ ಗನ್ಗಳನ್ನು ಮಾತ್ರ ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.ಪೋಲೀಸ್ ನಿಯಮಗಳನ್ನು ಪ್ರಶ್ನಿಸದೆ ಪೆಲೆಟ್ ಗನ್ಗಳ ಬಳಕೆಯನ್ನು ನೇರವಾಗಿ ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಜುಲೈ 20ರಂದು ದೆಹಲಿಯ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಿದ್ದನ್ನು ವಿರೋಧಿಸಿ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಮತ್ತು ಗಾಯಾಳುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಹೇಳಿಕೆ ಬಂದಿದೆ.
ಲಾಠಿಚಾರ್ಜ್ ಹಾಗೂ ಅಶ್ರುವಾಯು ವಿಫಲವಾದಾಗ ಬಲಪ್ರಯೋಗ ಅಗತ್ಯವಾಗಬಹುದು, ಆದರೆ ಅಂದಿನ ಘಟನೆಯಲ್ಲಿ ಹಂತ ಹಂತದ ಬಲಪ್ರಯೋಗದ ತತ್ವ ಪಾಲನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಕೋರ್ಟ್ ಒಪ್ಪಿದೆ.ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಹಾಗೂ ಉತ್ತಮ ಚಿಕಿತ್ಸೆ ಒದಗಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.








