ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ



(ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ.







ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ.






ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ.

ಪ್ರಮುಖವಾಗಿ ಬಾಳುಗೋಡಿನಲ್ಲಿ ಈ ವರ್ಷದ ಮಳೆಗಾಲದ ಋತುವಿನಲ್ಲಿ ಮೊದಲ ಬಾರಿಗೆ ಗ್ರಾಮೀಣ ಸಂಪರ್ಕ ಸೇತುವೆಯೊಂದು ಹಳ್ಳದ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಅಲ್ಲದೆ, ರಸ್ತೆಯ ಮೇಲೆಯೇ ಮಳೆ ನೀರು ರಭಸವಾಗಿ ಹರಿದಿದ್ದರಿಂದ ವಾಹನ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ತೀವ್ರವಾಗಿ ಕ್ಷೀಣಿಸಿದ್ದರಿಂದ ನದಿ, ಹಳ್ಳ ಹಾಗೂ ಬಾವಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿತ್ತು. ಆದರೆ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಬತ್ತಿದ್ದ ತೋಡುಗಳಿಗೆ ಮತ್ತೆ ಜೀವ ಬಂದಂತಾಗಿದೆ.

error: Content is protected !!
Scroll to Top