(ನ್ಯೂಸ್ ಕಡಬ) newskadaba.com, ಆ.20: ಬಂಟ್ವಾಳದ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಬೈಕ್ ಸವಾರನನ್ನು ಅಡ್ಡಗಟ್ಟಿ ಹಾಡಹಗಲೇ ಭೀಕರ ದರೋಡೆ ನಡೆಸಲಾಗಿದೆ.ಸುರತ್ಕಲ್ ನಿವಾಸಿ ಮಯ್ಯದಿ. ವಿವಿಧ ಅಂಗಡಿಗಳಿಂದ ಸಿಮೆಂಟ್ ಪೂರೈಕೆಯ ಹಣ ವಸೂಲಿ ಮಾಡಿ ಬೈಕ್ನಲ್ಲಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ.ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಮಯ್ಯದಿಯವರನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಬೆದರಿಸಿ ಹಣದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.
ಬ್ಯಾಗ್ನಲ್ಲಿ ಸುಮಾರು ₹8 ಲಕ್ಷಕ್ಕೂ ಅಧಿಕ ನಗದು ಹಣವಿತ್ತು ಎಂದು ಶಂಕಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್ಐ ಮಂಜುನಾಥ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಲಾಗಿದೆ.








