(ನ್ಯೂಸ್ ಕಡಬ) newskadaba.com, ಸೆ. 04 ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಪಾಲ್ಗೊಳ್ಳಲು ಸರ್ಕಾರ ಅಧಿಕೃತ ಸಮ್ಮತಿ ನೀಡಿದೆ.ಈ ಕುರಿತು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಇದುವರೆಗೆ 6 ಬಾರಿ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅಭಿಮನ್ಯು, ಈ ಬಾರಿಯ ಜಂಬೂಸವಾರಿಯಲ್ಲಿ ‘ನಿಶಾನೆ ಆನೆ’ಯಾಗಿ ಮುಂಚೂಣಿಯಲ್ಲಿ ಸಾಗಲಿದ್ದಾನೆ.
ಪ್ರಸಿದ್ಧ ಆನೆ ಅಭಿಮನ್ಯು ದಸರೆಯಲ್ಲಿ ಪಾಲ್ಗೊಳ್ಳುತ್ತಿರುವುದು ಕೋಟ್ಯಂತರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.








