ಕಾರ್ಕಳದಲ್ಲಿ ರಸ್ತೆ ಅಪಘಾತ ► ಕಡಬದ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಕಡಬ ನಿವಾಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಮಂಗಳವಾರದಂದು ನಡೆದಿದೆ.

 

ಮೃತ ಯುವಕನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಪ್ರಕಾಶ್ ಭಟ್ ಎಂಬವರ ಪುತ್ರ ಅಕ್ಷತ್ ಭಟ್(21) ಎಂದು ಗುರುತಿಸಲಾಗಿದೆ. ಅಕ್ಷತ್ ತನ್ನ ಬೈಕಿನಲ್ಲಿ ಕಾರ್ಕಳ ಕಡೆಗೆ ತೆರಳುತ್ತಿದ್ದಾಗ ಕಾರ್ಕಳದ ನೆಲ್ಲಿಕಾರು ಬಳಿ ಲಾರಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group