ವಿಟ್ಲ: ಅಕ್ರಮ ಮರ ಸಾಗಾಟ ► ಪಿಕಪ್ ಸಹಿತ‌ ಮರದ ದಿಮ್ಮಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.14. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿರುವ ಅರಣ್ಯಾಧಿಕಾರಿಗಳು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಕಲ್ಲಡ್ಕ – ವಿಟ್ಲ ಹೆದ್ದಾರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಕಸಬಾ ಗ್ರಾಮದ ಮಂಗಿಲ ಪದವು ಎಂಬಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಚಾಲಕ ವಾಹನವನ್ನು ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಮಂಗಳೂರು ವಿಭಾಗ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ರವರ ನಿರ್ದೇಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಮಾರ್ಗದರ್ಶನದಲ್ಲಿ ಪುತ್ತೂರು ವಲಯ ಅರಣ್ಯಾಧಿಕಾರಿ ವಿ.ಪಿ.ಕಾರ್ಯಪ್ಪರವರು ಪ್ರಕರಣದ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಟ್ಲ ಶಾಖಾ ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕ ಮಂಜುನಾಥ್ ಬಿ.ಎಸ್., ಅರಣ್ಯ ವೀಕ್ಷಕ ಎಸ್.ವಿ.ಶೇಖರ್ ಹಾಗೂ ವಾಚರ್ ಪದ್ಮನಾಭ ಪಾಲ್ಗೊಂಡಿದ್ದರು.

error: Content is protected !!

Join the Group

Join WhatsApp Group