ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. 2018-19 ನೇ ಸಾಲಿನ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸಹಾಯಧನ ಮಂಜೂರಾತಿಗಾಗಿ 50 ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಗೋಶಾಲೆಯವರು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಮಂಗಳೂರು ಕಛೇರಿಯಲ್ಲಿ ಅರ್ಜಿ ಫಾರಂಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 20 ರೊಳಗೆ ಪ್ರಸ್ತಾವನೆಯನ್ನು ಖುದ್ದಾಗಿ ಸಲ್ಲಿಸಬೇಕು.

 

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಮಂಗಳೂರು ರವರ ಕಛೇರಿ ದೂರವಾಣಿ ಸಂ: 0824-2492337 ಸಂಪರ್ಕಿಸಬಹುದಾಗಿದೆ ಅಥವಾ ಕಛೇರಿ ಸಮಯದಲ್ಲಿ ಖುದ್ದು ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ದಕ್ಷಿಣ ಕನ್ನಡ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group