(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗದ ದ್ವಿತೀಯ ಪಿ.ಯು.ಸಿ. ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ನೀಡಲು ಜುಲೈ 16 ಕೊನೆಯ ದಿನ. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಂದ ಪಡೆಯಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.









