ಮೇರಿಹಿಲ್ನ: ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮೇರಿಹಿಲ್ನ,ಜೂ.12. ಇಂದು ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ನ ಆವರಣದಲ್ಲಿ ಗೃಹರಕ್ಷಕ ಕವಾಯತು ನಡೆಸಲಾಯಿತು ಮತ್ತು ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಗಾಂಧಿಜೀ ಕನಸು ಕಂಡ ರಾಮರಾಜ್ಯದ ಕಲ್ಪನೆ ಸಾಕಾರವಾಗಲು ಪ್ರತಿಯೊಬ್ಬ ದೇಶದ ಪ್ರಜೆಯು ಸ್ವಚ್ಚತೆಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು.

ನಮ್ಮ ಪರಿಸರದ ಸ್ವಚ್ಚತೆಯನ್ನು ಕಾಪಾಡಿಕೊಂಡಲ್ಲಿ ಮಾತ್ರ ಶುದ್ಧ ಗಾಳಿ, ಬೆಳಕು, ನೀರು ದೊರೆತು ನಾವೆಲ್ಲರೂ ಆರೋಗ್ಯವಂತರಾಗಿ ಬಾಳಬಹುದು. ಪರಿಸರದ ವಿರುದ್ಧವಾಗಿ ನಾವು ನಡೆದಲ್ಲಿ ನಮಗೆ ಉಳಿಗಾಲವಿಲ್ಲ ಎಂದು ಎಚ್ಚರ ನೀಡಿದರು. ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಟರಾದ
ಶ್ರೀ ರಮೇಶ್, ಘಟಕಾಧಿಕಾರಿ, ಶ್ರೀ ಮಾರ್ಕ್ ಶೇರಾ ಹಾಗೂ ಮಂಗಳೂರು ಘಟಕದ ಗೃಹರಕ್ಷಕ, ಗೃಹರಕ್ಷಕಿಯರು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಗೃಹರಕ್ಷಕರು ಈ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದರು.

error: Content is protected !!

Join the Group

Join WhatsApp Group