ಕುಲ್ಕುಂದ: ಚಾಲಕನ ನಿಯಂತ್ರಣ ತಪ್ಪಿ ಧರೆಗಿಳಿದ ಕಾರು ► ಬಿಳಿನೆಲೆ ಶಾಲೆಯ ಮುಖ್ಯ ಶಿಕ್ಷಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.08. ವಾಹನವೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿದ ಕಾರೊಂದು ರಸ್ತೆಯ ಎಡಬದಿಯಲ್ಲಿದ್ದ ಧರೆಗೆ ಢಿಕ್ಕಿಯಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಲ್ಕುಂದ ಸಮೀಪ ಶನಿವಾರದಂದು ನಡೆದಿದೆ.

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಶರ್ಮರವರು ತನ್ನ ಮಾರುತಿ ಬ್ರೆಝಾ ಕಾರಿನಲ್ಲಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದಾಗ ಕುಲ್ಕುಂದ ಸಮೀಪ ಎದುರಿನಿಂದ ಬರುತ್ತಿದ್ದ ಕಾರೊಂದು ಢಿಕ್ಕಿಯಾಗುವುದನ್ನು ತಪ್ಪಿಸುವುದಕ್ಕಾಗಿ ರಸ್ತೆಯ ಎಡ ಬದಿಗೆ ತಿರುಗಿಸಿದ್ದಾರೆ. ತಕ್ಷಣವೇ ರಸ್ತೆಯ ಎಡಬದಿಯಲ್ಲಿದ್ದ ಧರೆಗೆ ಢಿಕ್ಕಿ ಹೊಡೆದ ಕಾರು ಹಿಂತಿರುಗಿ ನಿಂತಿದೆ. ಚಾಲಕ ಕೃಷ್ಣ ಶರ್ಮ ಸೀಟ್ ಬೆಲ್ಟ್ ಧರಿಸಿದ್ದರಿಂದ ಏರ್ ಬ್ಯಾಗ್ ತೆರೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ

error: Content is protected !!
Scroll to Top