ಕೊಣಾಜೆ: ಯುವಕನಿಗೆ ಚೂರಿ ಇರಿತ ► ಮೂವರ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.01. ಯುವಕನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಹೊರವಲಯದ ಕೊಣಾಜೆ ಸಮೀಪದ ಅಸೈಗೋಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹಾವೇರಿಯ ರಮೇಶ್ (26) ಚೂರಿ ಇರಿತಕ್ಕೊಳಗಾದವರು. ರಮೇಶ್ ಅಸೈಗೋಳಿ ಜಂಕ್ಷನ್ ನಲ್ಲಿ ನಿಂತಿದ್ದ ವೇಳೆ ಮೂವರ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದೆ‌. ಗಾಯಾಳುವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಶಮೀರ್, ಶವಾಝ್ ಹಾಗೂ ಇಲ್ಯಾಸ್ ಎಂಬವರು ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

error: Content is protected !!
Scroll to Top