ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಕನ್ನಡ ಸಾಹಿತ್ಯ ಪರಿಷತ್ತಿನ 2018-19ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2019ನೇ ಜನವರಿ 11, 12 ಮತ್ತು 13 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. 29-12-2018ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು. 
 ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ: 080-26623584 ಮೂಲಕ ಪಡೆಯಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in  ಮೂಲಕ ಸಹ ಪಡೆಯಬಹುದು ಎಂದು ಗೌರವ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
error: Content is protected !!

Join the Group

Join WhatsApp Group