ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಠಾಣಾ ವ್ಯಾಪ್ತಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ.

ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ ಹಾಗೂ ಸಹ ಸವಾರ ಕಕ್ಕೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಹಲ್ಲು ಉದುರಿ ಕಾರಿನ ಮೇಲೆ ಬಿದ್ದಿತ್ತೆನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group