ನಂಬಿಗರ ಅಂಬಿಗ -ನಾಟಕ ಪ್ರದರ್ಶನ

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):- ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2018-19ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅಂಬಿಗರ ಚೌಡಯ್ಯನವರ ಬದುಕು ಮತ್ತು ಅವರ ವಚನಗಳ ಮೌಲ್ಯಗಳನ್ನು ಪರಿಚಯಿಸುವ ಸದುದ್ಧೇಶದಿಂದ ನಂಬಿಗರ ಅಂಬಿಗ ಎಂಬ ನಾಟಕ ಪ್ರದರ್ಶನವನ್ನು ಏಪ್ರಿಲ್ 27 ರಂದು ಸಂಜೆ 7 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. ಡಾ, ನರಸಿಂಹ ಮೂರ್ತಿ.ಆರ್ ವಿಶ್ರಾಂತ ಪ್ರಾಧ್ಯಾಪಕರು, ಮಂಗಳೂರು ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲ್ಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಕಿಶೋರಿ ನಾಯಕ್.ಕೆ ಪ್ರಭಾರ ಕುಲಪತಿಗಳು ಮಂಗಳೂರು ವಿಶ್ವವಿದ್ಯಾನಿಲಯ ಇವರು ವಹಿಸಿಕೊಳ್ಳಲಿದ್ದಾರೆ.

Also Read  ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

error: Content is protected !!
Scroll to Top