(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ ಇವರು ಮೇ 28 ರಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ನಿರ್ದೇಶಕರನ್ನು ಭೇಟಿ ಮಾಡಲು ಇಚ್ಛಿಸಿದಲ್ಲಿ ಅಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಊರ್ವಸ್ಟೋರ್ಸ್ ಹತ್ತಿರವಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.









