ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಬಂಟ್ವಾಳದಿಂದ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಇವರ ಶವಗಳು ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಕಂಡುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾರ್ಲೆ ಗ್ರಾಮದ ಸಹನಾ(16) ಮತ್ತು ಕುಂಬರಡಿ ಗ್ರಾಮದ ಅರುಣ್(17) ಇವರಿಬ್ಬರು ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದರು. ಬಾಲ್ಯದಿಂದಲೂ ಇಬ್ಬರೂ ಪರಿಚಯಸ್ಥರಾಗಿದ್ದು ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತಿದ್ದರೆನ್ನಲಾಗಿದೆ. ಆದರೆ ಮನೆಯವರಲ್ಲಿ ವಿಷಯ ತಿಳಿಸಲು ಹೆದರಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.

error: Content is protected !!

Join the Group

Join WhatsApp Group