ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ.


ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಇಂತಿವೆ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000/- ಹಾಗೂ ನಗರ ಪ್ರದೇಶವಾದಲ್ಲಿ ರೂ.2,00,000/- ಮಿತಿಯೊಳಗಿರಬೇಕು. ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು.

ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್‍ನೊಂದಿಗೆ ಬ್ಯಾಡ್ಜ್ ಅನ್ನೂ ಹೊಂದಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಕನಿಷ್ಟ 1-20 ಎಕರೆಯಿಂದ ಗರಿಷ್ಟ 5-00 ಎಕರೆ ಜಮೀನು ಹೊಂದಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.


ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ / ಆಧಾರ್ ಕಾರ್ಡ್, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್‍ನ ಮೊದಲ ಪುಟದ ಪ್ರತಿ. ಯೋಜನಾ ವರದಿ / ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ) ವಾಹನವಾಗಿದ್ದಲ್ಲಿ, ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಾಹನ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್‍ನ ಪ್ರತಿ ಹಾಗೂ ವಯಸ್ಸು 50 ವರ್ಷದೊಳಗಿರುವ ಬಗ್ಗೆ ದೃಢೀಕರಣ ಪತ್ರ, ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಚಾಲ್ತಿ ಪಹಣಿ (ಆರ್.ಟಿ.ಸಿ. ಜೆರಾಕ್ಸ್) ಮತ್ತು ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ.

ಸ್ವಯಂ ಉದ್ಯೋ

ಗ ಕಾರ್ಯಕ್ರಮ್ರ :- ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು ಬ್ಯಾಂಕ್ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಘಟಕ ವೆಚ್ಚ ಮತ್ತು ಸಹಾಯಧನದ ಮಿತಿ ಈ ಕೆಳಕಂಡಂತಿದೆ. ಘಟಕ ವೆಚ್ಚ ರೂ 5 ಲಕ್ಷದ ವರೆಗೆ, ಸಹಾಯಧನ ಘಟಕ ವೆಚ್ಚದ ಶೇ.70 ರಷ್ಟು, ಗರಿಷ್ಠ ರೂ.3.50 ಲಕ್ಷ. ಘಟಕ ವೆಚ್ಚ ರೂ 5 ಲಕ್ಷ ಮೇಲ್ಪಟ್ಟು 10 ಲಕ್ಷದ ವರೆಗೆ, ಸಹಾಯಧನ ಘಟಕ ವೆಚ್ಚದ ಶೇ.60 ರಷ್ಟು, ಗರಿಷ್ಠ ರೂ.5 ಲಕ್ಷ. ಘಟಕ ವೆಚ್ಚ ರೂ 10 ಲಕ್ಷ ದಿಂದ ಮೇಲ್ಪಟು 20 ಲಕ್ಷದ ವರೆಗೆ, ಸಹಾಯಧನ ಘಟಕ ವೆಚ್ಚದ ಶೇ. 50 ರಷ್ಟು, ಗರಿಷ್ಠ ರೂ.5 ಲಕ್ಷ.

ಪ್ರೇರಣ್ರಾ ಯೋಜನೆ :- ಮೈಕ್ರ್ರೋ ಕ್ರೆಡಿಟ್ರ್ ಯೋಜನೆ : ಈ ಯೋಜನೆಯಡಿ ಸ್ವ ಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಪಂಗಡದ ಮಹಿಳಾ ಫಪೇಕ್ಷಿಗಳಿಗೆ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೆರವು ಒದಗಿಸಲಾಗುವುದು. ಒಬ್ಬ ಸದಸ್ಯರಿಗೆ ರೂ.15000/- ಸಹಾಯಧನ ಮತ್ತು ರೂ.10000/- ನೇರ ಸಾಲ ಸೇರಿದಂತೆ ಒಟ್ಟು ರೂ.25000/-ಗಳಂತೆ ಒಟ್ಟು 10 ಸದಸ್ಯರಿಗೆ ರೂ.2.50 ಲಕ್ಷ ನೀಡಲಾಗುವುದು. ಒಂದು ವೇಳೆ ಸಂಘದಲ್ಲಿ 10 ಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ ಸಂಖ್ಯೆಗನುಗುಣವಾಗಿ ಸಾಲ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚದಲ್ಲಿ ಸಹಾಯಧನ ಮತ್ತು ಸಾಲದ ಮೊತ್ತವನ್ನು ನಿಗಮದಿಂದಲೇ ನೀಡಲಾಗುವುದು. ಸಾಲದ ಹಣಕ್ಕೆ ಬಡ್ಡಿ ವಾರ್ಷಿಕ ಶೇ.4ರಷ್ಟಿದ್ದು, ಸಾಲದ ಹಣವನ್ನು ಬಡ್ಡಿ ಸಮೇತವಾಗಿ 36 ಮಾಸಿಕ ಸಮಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.


ಸಮಗ್ರ ಗಂಗಾ ಕಲ್ಯಾಣ ಯೋಜನೆ :- ವೈಯಕ್ತಿಕ್ತ ನೀರಾವರಿ ಕೊಳವೆ ಬಾವಿ /ತೆರೆದ ಬಾವಿ ಯೋಜನೆ : ಪರಿಶಿಷ್ಟ ಪಂಗಡಗಳ ಸಣ್ಣ ಮತ್ತು ಅತೀಸಣ್ಣ ರೈತರುಗಳು ಹೊಂದಿರುವ ಕನಿಷ್ಟ 1-20 ಎಕರೆಯಿಂದ ಗರಿಷ್ಠ 5-00 ಎಕರೆವರೆಗೂ ಖುಷ್ಕಿ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಅಥವಾ ತೆರೆದ ಬಾವಿ ನಿರ್ಮಿಸಿ, ಪಂಪ್ ಮೋಟಾರ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸುವುದು ಈ ಯೋಜನೆಯ ಅನುಷ್ಟಾನದ ಉದ್ದೇಶವಾಗಿರುತ್ತದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಮಾತ್ರ ಕನಿಷ್ಟ ಮೀತಿ 1-00 ಎಕರೆ ಇರುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮಾತ್ರ ಸೀಮಿತಗೊಂಡಂತೆ ಘಟಕ ವೆಚ್ಚ ರೂ.4.50 ಲಕ್ಷವಿದ್ದು, ಇದರಲ್ಲಿ ರೂ.3.50 ಲಕ್ಷ ಸಹಾಯಧನ, ರೂ. 0.50 ಲಕ್ಷ ವಿದ್ಯುದ್ಧೀಕರಣಕ್ಕೆ ಹಾಗೂ ಅವಧಿಸಾಲ ರೂ.0.50 ಲಕ್ಷಗಳಿಗೆ ನಿಗಧಿಪಡಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ರೂ.3.50 ಲಕ್ಷ ಘಟಕ ವೆಚ್ಚ ನಿಗಧಿಪಡಿಸಲಾಗಿದ್ದು, ರೂ.2.50 ಲಕ್ಷದ ಸಹಾಯಧನ ಹಾಗೂ ರೂ.0.50 ಲಕ್ಷ ವಿದ್ಯುದ್ಧೀಕರಣ ಮತ್ತು ರೂ.0.50 ಲಕ್ಷ ಅವಧಿ ಸಾಲವಾಗಿರುತ್ತದೆ.


ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಕಛೇರಿಯಿಂದ ಹಾಗೂ ನಿಗಮದ ವೆಬ್ ಸೈಟ್‍ನಿಂದ ಪಡೆಯಬಹುದು. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಆಯಾ ಜಿಲ್ಲೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಧಾಪಕರ ಕಛೇರಿಯಲ್ಲಿ ನಿಗದಿಪಡಿಸಿದ ಉಚಿತ ಅರ್ಜಿಗಳನ್ನು ಪಡೆಯಬಹುದು ಹಾಗೂ ನಿಗಮದ ವೆಬ್‍ಸೈಟ್ www.karnataka.gov.in/kmvstdcl ಪ್ರಕಟಣೆ ಮೆನುವಿನಲ್ಲಿ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ದಿನಾಂಕ:01.06.2019 ರಿಂದ 31.07.2019 ರೊಳಗೆ ಸಲ್ಲಿಸುವುದು. ಅಂತಿಮ ದಿನಾಂಕ: 31.07.2019ರ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರ ಪ್ರಕಟನೆ ತಿಳಿಸಿದೆ.

error: Content is protected !!

Join the Group

Join WhatsApp Group