ಮಂಗಳೂರು: ಬೈಕಿಗೆ ಲಾರಿ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಸಿದ್ದೀಕ್ ಸೋಮವಾರ ರಾತ್ರಿ ಬೈಕಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ ಇವರಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Also Read  ಕಡಬ: ಶಾಲಾ ಬಳಿ ತಂಬಾಕು ಮಾರಾಟ- ಸಿಎಂ ಕಛೇರಿಗೆ ಪತ್ರ ಬರೆದ 3ನೇ ತರಗತಿ ಬಾಲಕಿ..! ; ತುರ್ತು ಸ್ಪಂದಿಸಿದ ಸಿಎಂ ಕಛೇರಿ- ಎರಡೇ ಗಂಟೆಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

error: Content is protected !!
Scroll to Top