ಸಿ.ಐ.ಎಸ್.ಎಫ್. ಆರೋಗ್ಯ ಶಿಬಿರ ಮತ್ತು ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ಸಿಐಎಸ್‍ಎಫ್‍ನ ಸಿಬ್ದಂದಿಗಳಿಗೆ “ಆರೋಗ್ಯ ಶಿಬಿರ ಮತ್ತು ಆರೋಗ್ಯ ಜಾಗೃತಿ” ಕಾರ್ಯಕ್ರಮವನ್ನು ಜೂನ್ 19 ರಂದು ಪೂರ್ವಾಹ್ನ 10 ಗಂಟೆಗೆ ಸಿಐಎಸ್‍ಎಫ್ ಗ್ರಾಮ, ಎಂ.ಆರ್.ಪಿ.ಎಲ್ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸಿ.ಐ.ಎಸ್.ಎಫ್. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಉಪ ಕಮಾಂಡೇಂಟ್ ಮೃತ್ಯುಂಜಯ ಸ್ವಾಮಿ.ಡಿ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣರಾವ್ ಮತ್ತು ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ರತ್ನಾಕರ ಇವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group