ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಜೂನ್ 21 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ದಕ್ಷಿಣ ಕನ್ನಡ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಸಂಧರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ 200 ಮೀ. ಸುತ್ತಳತೆಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸಿ ಆದೇಶಿಸಿದ್ದಾರೆ.ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಿತರ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

Also Read  ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.ನಿಷೇಧಿತವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಯಿಸುವುದನ್ನು ನಿಷೇಧಿಸಲಾಗಿದೆ.

ಪೂರಕ ಪರೀಕ್ಷೆಯ ಪರೀಕ್ಷಾಕೇಂದ್ರಗಳ ವಿವರ ಇಂತಿವೆ: ಬಂಟ್ವಾಳ – ಶ್ರೀ ಶಾರದಾ ಪ್ರೌಢಶಾಲೆ, ಪಾಣೆಮಂಗಳೂರು, ಎಸ್.ವಿ.ಎಸ್. ಪ್ರೌಢಶಾಲೆ, ವಿಠಲ ಪದವಿ ಪೂರ್ವ ಕಾಲೇಜು(ಪ್ರೌ.ಶಾ), ವಿಟ್ಲ. ಬೆಳ್ತಂಗಡಿ – ಸಂತ ತೆರೇಸಾ ಪ್ರೌಢಶಾಲೆ, ಎಸ್.ಡಿ.ಎಂ. ಪ್ರೌಢಶಾಲೆ, ಉಜಿರೆ. ಮಂಗಳೂರು ಉತ್ತರ ವಲಯ – ಸೈಂಟ್ ಅಲೋಶಿಯಸ್ ಪ್ರೌಢಶಾಲೆ, ಕೊಡಿಯಾಲ್ ಬೈಲ್, ಮಿಲಾಗ್ರೀಸ್ ಪ.ಪೂ. ಕಾಲೇಜು ಹಂಪನಕಟ್ಟೆ, ಸ.ಪ.ಪೂ ಕಾಲೇಜು, ರಥಬೀದಿ, ಮಂಗಳೂರು ಉತ್ತರ, ಕೆನರಾ ಬಾಲಕಿಯರ ಪ್ರೌಢಶಾಲೆ, ಡೊಂಗರಕೇರಿ. ಮಂಗಳೂರು ದಕ್ಷಿಣ ವಲಯ- ಕಾಸ್ಸಿಯಾ ಪ್ರೌಢಶಾಲೆ, ಜೆಪ್ಪು, ಪದುವಾ ಅನುದಾನಿತ ಪ್ರೌಢಶಾಲೆ ನಂತೂರು, ಸೈಂಟ್ ಆಗ್ನೇಸ್ ಪ್ರೌಢಶಾಲೆ, ಬೆಂದೂರು, ಸೈಂಟ್ ಮೆರೀಸ್ ಹೆಣ್ಣು ಮಕ್ಕಳ ಪ್ರೌಢಶಾಲೆ ಫಳ್ನೀರು, ಕಪಿತಾನಿಯೋ ಪ್ರೌಢಶಾಲೆ, ಕಂಕನಾಡಿ. ಮೂಡಬಿದ್ರೆ ವಲಯ- ಜೈನ್ ಪ.ಪೂ. ಕಾಲೇಜು, ಮೂಡಬಿದ್ರೆ. ಪುತ್ತೂರು – ಸೈಂಟ್ ಪಿಲೋಮಿನಾ ಪ್ರೌಢಶಾಲೆ, ದರ್ಬೆ, ಸೈಂಟ್ ವಿಕ್ಟರ್ಸ್ ಬಾಲಕಿಯರ ಪ್ರೌಢಶಾಲೆ, ಪುತ್ತೂರು. ಸುಳ್ಯ – ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಗಳು ನಡೆಯಲಿದೆ.

Also Read   'ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ'      ಸಿಎಂ ಸಿದ್ದರಾಮಯ್ಯ ಘೋಷಣೆ  

error: Content is protected !!
Scroll to Top