ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜೂನ್ 29 ರಂದು ಅಪರಾಹ್ನ 12 ಗಂಟೆಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಜೂನ್ 28 ರೊಳಗಾಗಿ ಲಿಖಿತವಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 2214021ನ್ನು ಸಂಪರ್ಕಿಸಬೇಕು ಎಂದು ಜಂಟಿನಿರ್ದೇಶಕರು,ಜಿಲ್ಲಾ ಕೈಗಾರಿಕಾ ಕೇಂದ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group