ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಕಂದಾಯ ಇಲಾಖೆಯ ದ.ಕ ಜಿಲ್ಲಾ ಘಟಕದ ಪ್ರಥಮ ದರ್ಜೆ ಸಹಾಯಕ/ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದ, ದ್ವಿತೀಯ ದರ್ಜೆ ಸಹಾಯಕರ ವೃಂದ, ಗ್ರಾಮಕರಣಿಕರ ವೃಂದ, ಸಹಾಯಕರ/ ದಫೇದಾರ ವೃಂದ, ವಾಹನ ಚಾಲಕರ ವೃಂದ, ಡಿ’ ಗ್ರೂಪ್ ನೌಕರರ ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.


ಸರ್ವೋಚ್ಛ ನ್ಯಾಯಾಲಯವು ದಿನಾಂಕ:10-5-2019 ರಂದು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಜೇಷ್ಠತಾ ಪಟ್ಟಿಯನ್ನು ಪರಿಷ್ಕರಿಸುವಂತೆ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಿದ್ದು, ಅದರಂತೆ ಸಂಬಂಧಪಟ್ಟ ನೌಕರರು ತಾಲೂಕು ಕಚೇರಿ/ ಸಹಾಯಕ ಆಯುಕ್ತರ ಕಚೇರಿಗಳಲ್ಲಿ ಸದ್ರಿ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ. ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಕೃತ ಜ್ಞಾಪನಾ ಪತ್ರ ಪ್ರಕಟವಾದ 7 ದಿನಗಳೊಳಗೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸೂಕ್ತ ದಾಖಲೆಗಳೊಂದಿಉಗೆ ಸಲ್ಲಿಸಲು ತಿಳಿದ್ದಾರೆ. ನಿಗಧಿತ ಅವಧಿಯೊಳಗೆ ಆಕ್ಷೇಪಣೆಗಳು ಬಾರದಿದ್ದರೆ ಯಾವುದೇ ಆಕ್ಷೇಪಣೆಗಳಿಲ್ಲವೆಂದು ಪರಿಗಣಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಹೊರಡಿಸಲಾಗುವುದೆಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Also Read  ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

error: Content is protected !!