ಪಂಜ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸುಬ್ರಹ್ಮಣ್ಯ ಕಾಲೇಜಿನ ಗುಮಾಸ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.11. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಗುರುವಾರ ಸಂಜೆ ಪಂಜದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಪ್ರಥಮ ದರ್ಜೆ ಗುಮಾಸ್ತ ಸುಳ್ಯದ ಶೀನಪ್ಪ ರೈ(53) ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ನಿಂತಿಕಲ್ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಪಂಜದ ಕೃಷ್ಣನಗರ ಎಂಬಲ್ಲಿ ಢಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಶೀನಪ್ಪ ರೈಯವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರು. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top