ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಕೇರಳ ಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಜುಲೈ.27.ಇಂದು ಕೇರಳಕ್ಕೆ ಭೇಟಿ ನೀಡಿದ ಶ್ರೀಲಂಕಾ ಪ್ರಧಾನಿ ರಣಿಲ್‌ ವಿಕ್ರಮ ಸಿಂಘೆ ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.ಇಂದು ಕುಂಬಳೆ ನೀರ್ಚಾಲು ಬಳಿಯ ಬೇಳ ಕುಮಾರ ಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಖಾಸಗಿ ಕಾರ್ಯಕ್ರಮವಾದ ಕಾರಣ ಪತ್ರಕರ್ತರಿಗೆ    ಪ್ರವೇಶನಿಷೇಧಿಸಲಾಗಿತ್ತು.ಕಾಸರಗೋಡು ಬೇಕಲದ ಲಲಿತ್‌ ರೆಸಾರ್ಟ್‌ ಹೆಲಿಪ್ಯಾಡ್‌ ನಿಂದ ಮಂಗಳೂರಿಗೆ ಹೊರಟ ರಣಿಲ್‌ ವಿಕ್ರಮ್‌ ಸಿಂಘೆ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್‌ ಬಾಬು ಬೀಳ್ಕೊಟ್ಟರು.

Scroll to Top