ನೂಜಿಬಾಳ್ತಿಲ: 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ

(ನ್ಯೂಸ್ ಕಡಬ) newskadaba.com ಕಡಬ, ಆ .15, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ನಡೆಯಿತು.

ಬೆಳಿಗ್ಗೆ ನೂಜಿಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೃಷ್ಣ ಹೆಬ್ಬಾರ್ ಪೂಜಾವಿಧಿವಿಧಾನಗಳನ್ನು ನಡೆಸಿದರು. ಕಡಬ ಮೆಸ್ಕಾಂ ಸಿಬ್ಬಂದಿ ರವಿ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ಮುಖ್ಯೋಪಧ್ಯಾಯ ಶ್ರೇಯಾಂಸ್, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮೋನಪ್ಪ ಗೌಡ ಅರಿಮಜಲು, ಗ್ರಾ.ಪಂ.ಸದಸ್ಯ ರಾಮಚಂದ್ರ ಗೌಡ ಶುಭಹಾರೈಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹರೀಶ್ ಗೌಡ ನಡುವಳಿಕೆ ಸ್ವಾಗತಿಸಿ, ಕಾರ್ಯದರ್ಶಿ ಭಿರ್ಮಣ ಗೌಡ ಬಳ್ಳಿತಡ್ಡ ವಂದಿಸಿದರು. ಕೋಶಾಧಿಕಾರಿ ಪುರುಷೋತ್ತಮ ಗೌಡ ಕುಕ್ಕುತ್ತಡಿ, ಉಪಾಧ್ಯಕ್ಷ ಕಿಶೋರ್ ಕುಮಾರ್ ಪಾದೆ, ಜೊತೆಕಾರ್ಯದರ್ಶಿ ನಾರಾಯಣ ಗೌಡ ನಿಡ್ಡೊ, ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಅಷ್ಟಮಿ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

error: Content is protected !!

Join the Group

Join WhatsApp Group