ಕರ್ನಾಟಕ ಋಣಮುಕ್ತ ಕಾಯ್ದೆಯ ಬಗ್ಗೆ ಸ್ಪಷ್ಟನೆ ➤ ನೀವು ಮಾಡಿರುವ ಸಾಲಕ್ಕೆ ಕಾಯ್ದೆ ಅನ್ವಯ ಆಗುತ್ತದೆಯೇ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com
ಮಂಗಳೂರು, ಸೆ.02. ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೊಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು, ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾ ದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ, ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ.

Also Read  ➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ!


ಅಲ್ಲದೆ, ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ, ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ, ಜಿಲ್ಲಾಡಳಿತ ಅಥವಾ ತಾಲೂಕು ಆಡಳಿತ ಹೊಣೆಯಾಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

Also Read  ಅನಂತಕುಮಾರ್ ನಿಧನಕ್ಕೆ ವಿಕೃತಿ ಮೆರೆದ 'ಮಂಗಳೂರು ಮುಸ್ಲಿಮ್ಸ್' ಫೇಸ್‌ಬುಕ್‌ ಪೇಜ್ ► ಪಾಂಡೇಶ್ವರ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು

Gems

error: Content is protected !!
Scroll to Top