ಕಿರು ಸೇತುವೆಯಿಂದ ಕೆಳಕ್ಕುರುಳಿದ ಇನ್ನೋವಾ ಕಾರು ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.25. ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಕಿರು ಸೇತುವೆಗೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಗಳ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಬೆಂಗಳೂರು ಮೂಲದವರೆಂದು ಹೇಳಲಾಗಿದೆ. ಮೃತರು ಇನ್ನೋವಾ ಕಾರಿನಲ್ಲಿ ಹೊರನಾಡಿಗೆ ಆಗಮಿಸಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಭಾರೀ ಗಾಳಿ ಮಳೆಯ ಪರಿಣಾಮ ಬಡವನ ದಿಣ್ಣೆ ಸಮೀಪ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಣಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

error: Content is protected !!
Scroll to Top