ಅಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ➤ಗಾಯಗೊಂಡ ಬೈಕ್ ಸವಾರ

(ನ್ಯೂಸ್ ಕಡಬ) newskadaba.com  ಪುತ್ತೂರು, .30  ಅಟೋರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಸವಾರ ಯಾದವ ಪೂಜಾರಿ ಎಂಬವರು ಗಾಯಗೊಂಡ ಘಟನೆ ಮಂಗಳವಾರದಂದು ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಜಂಕ್ಷನ್ ಬಳಿ ನಡೆಯಿತು.


ಡಿಕ್ಕಿ ಹೊಡೆದ ಪರಿಣಾಮ, ಮೋಟಾರ್ ಸೈಕಲ್ ಸವಾರ ಯಾದವ ಪೂಜಾರಿ ಎಂಬವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದುದರಿಂದ, ಅವರಿಗೆ ತಲೆಗೆ ಮತ್ತು ಕೈಗೆ ಗಾಯವಾಗಿರುತ್ತದೆ. ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group