ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅಪಘಾತ ➤ ಮೂವತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ಅಪಘಾತಕ್ಕೀಡಾಗಿ 30 ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರದಂದು ನಡೆದಿದೆ.


ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ ಪುತ್ತೂರು ಘಟಕದ ವತಿಯಿಂದ ಮಂಗಳವಾರ ರಾತ್ರಿ ಹೆಚ್ಚುವರಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿಗೆಂದು ಹೊರಟಿದ್ದು, ಬುಧವಾರ ಬೆಳಗಿನ ಜಾವ ನೆಲಮಂಗಲ ಸಮೀಪದ ಸೋಲೂರು ಎಂಬಲ್ಲಿ ಚಾಲಜನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಮೂವತ್ತಕ್ಕೂ ಹೆಚ್ಚಿನ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group