ನೆಲ್ಯಾಡಿ: ರಸ್ತೆಗುರುಳಿದ ಬೈಕ್ ➤ ಶಾಲಾ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.28. ಬೈಕೊಂದು ಸ್ಕಿಡ್ ಆಗಿ ರಸ್ತೆಗುರುಳಿದ ಪರಿಣಾಮ ಸಹ ಸವಾರ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರದಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೋಲ್ಪೆ ನಿವಾಸಿ, ನೆಲ್ಯಾಡಿಯ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಕಿರಣ್ ಸಹ ಸವಾರನಾಗಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗೋಳಿತೊಟ್ಟು ಸಮೀಪ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಹ ಸವಾರ ಗಂಭೀರ ಗಾಯಗೊಂಡಿದ್ದಾನೆ. ಕಿರಣ್ ನನ್ನು ತಕ್ಷಣವೇ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಹನುಮಾನ್ ಸ್ಮರಣೆ ಮಾಡುತ್ತ ನಿತ್ಯ ಭವಿಷ್ಯ ತಿಳಿಯೋಣ

error: Content is protected !!
Scroll to Top