ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.06. ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿ ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌.

Also Read  ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ

error: Content is protected !!
Scroll to Top