ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕನ್ನಡ ಸಾಹಿತ್ಯ ಪರಿಷತ್ತಿನ 2019-20 ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿಸೆಂಬರ್ 27, 28, 29 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 18 ರ ನಂತರವು ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇವರಲ್ಲಿ ವಿಚಾರಿಸಬೇಕು, ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ : 080-26623584  ಮೂಲಕ ಪಡೆದುಕೊಳ್ಳಬಹುದು ಎಂದು ಕನ್ನಡಸಾಹಿತ್ಯ ಪರಿಷತ್ತು, ಗೌರವ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group