ಮಾಣಿ: ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ಚಾಲಕನ ನಿಯಂತ್ರಣ ತಪ್ಪಿದ ರಿಟ್ಝ್ ಕಾರೊಂದು ರಸ್ತೆ ಬದಿಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

Nk Kukke


ಮೃತರನ್ನು ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ ಸಿರಾಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿಕೇರಿಯಲ್ಲಿ ನಡೆದ ಎಸ್ಕೆಎಸ್ಸೆಸ್ಸೆಫ್ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ತೆರಳಿ ಹಿಂದಿರುಗುತ್ತಿದ್ದ ವೇಳೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೈಲುಗಲ್ಲಿಗೆ ಢಿಕ್ಕಿ ಹೊಡೆದು, ಉರುಳಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಸಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರದಂದು ಮೃತಪಟ್ಟರು.

Also Read  ನಡುಮಜಲು: ಶ್ರೀ ಹೊಸಮ್ಮ‌ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನ ► ಇಂದಿನಿಂದ (ಮಾರ್ಚ್ 13 ರಿಂದ 22) ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಮಹೋತ್ಸವ

error: Content is protected !!
Scroll to Top