ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ.

Nk Kukke

ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್ ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು  ಅಮಾಯಕರು ಬಲಿಯಾಗಿದ್ದರು.

Also Read  ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ

error: Content is protected !!
Scroll to Top